25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ, ಬಂಟರ ವಲಯ ಸಮಿತಿ ಉಜಿರೆ , ಬಂಟರ ಯಾನೆ ನಾಡವರ ಸಂಘ, ಬೆಳ್ತಂಗಡಿ ಮತ್ತು ಸ್ಪಂದನ ಸೇವಾ ತಂಡ ಬೆಳ್ತಂಗಡಿ ಇವರುಗಳ ಸಹಾಯ ಹಸ್ತದೊಂದಿಗೆ ಮುಂಡಾಜೆ ಗ್ರಾಮ ಸಮಿತಿಗೆ ಒಳಪಟ್ಟ ಶೇಷಪ್ಪ ಗುಣವತಿ ಶೆಟ್ಟಿ ಇವರಿಗೆ ಮನೆ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿ , ನ.27 ರಂದು ಮನೆಯ ಗ್ರಹಪ್ರವೇಶ ನಡೆಯಿತು.

ಮನೆ ನಿರ್ಮಾಣದಲ್ಲಿ ಕೈಜೋಡಿಸಿದ ಗಣ್ಯರಾದ ಸ್ಪಂದನ ಸೇವಾ ತಂಡದ ಅಧ್ಯಕ್ಷ ಹಾಗೂ ಬೆಳ್ತಂಗಡಿ ಬಂಟರ ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಉಜಿರೆ ವಲಯದ ಅಧ್ಯಕ್ಷರಾದ ವನಿತಾ ಶೆಟ್ಟಿ, ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಳಂಜ, ಗಂಗಾಧರ ರೈ ಉಜಿರೆ, ಕೊಡುಗೈದಾನಿ ಕಂಟ್ರಾಕ್ಟ್ ದಾರರಾದ ಶರತ್ ಮಂಗಳೂರು ಇವರನ್ನು ನ.26 ರಂದು ಮುಂಡಾಜೆ ಬಂಟರ ಗ್ರಾಮ ಸಮಿತಿ ವತಿಯಿಂದ ಅತಿಥೇಯ ಮನೆಯಲ್ಲಿ ನಡೆಸಿದ ಸರಳ ಸಮಾರಂಭದಲ್ಲಿ ಗೌರವಿಸಲಾಯಿತು.

ಮುಖ್ಯ ಆರ್ಥಿಕ ಸಹಕಾರ ನೀಡಿದ ಪ್ರಶಾಂತ್ ಶೆಟ್ಟಿ ಮೂಡಯೂರು, ಉಮೇಶ್ ಶೆಟ್ಟಿ ದುರ್ಗಾ ನಿಲಯ ಉಜಿರೆ, ಸದಾನಂದ ಶೆಟ್ಟಿ, ಸುಮುಖ ಸುಪಾರಿ ಟ್ರೇಡರ್ಸ್ ಬೆಳ್ತಂಗಡಿ, ಕಾರ್ತಿಕ್ ಶೆಟ್ಟಿ ಕಾನರ್ಪ ಮನೆ ಮುಂಡಾಜೆ ,ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಇವರುಗಳ ಸಾಮಾಜಿಕ ಕಳಕಳಿ ಹಾಗೂ ಪ್ರಯತ್ನವನ್ನು ಸ್ಮರಿಸಿಕೊಳ್ಳಲಾಯಿತು.

ವೇದಿಕೆಯಲ್ಲಿ ಮುಂಡಾಜೆ ಗ್ರಾಮ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ಗೌರವ ಸಲಹೆಗಾರ ಪುರುಷೋತ್ತಮ ಶೆಟ್ಟಿ ಅಗರಿ, ಉಪಸ್ಥಿತರಿದ್ದರು. ತನು ಮನ ಧನ ಸಹಕಾರ ನೀಡಿದ ಮುಂಡಾಜೆ ಗ್ರಾಮ ಸಮಿತಿಯ ಎಲ್ಲಾ ಬಂಧುಗಳು ಮತ್ತು ಉಜಿರೆ ವಲಯದ ಎಲ್ಲಾ ಬಂಧುಗಳಿಗೆ ಕೃತಜ್ಞತೆ ಸಮರ್ಪಿಸಲಾಯಿತು. ಮುಂಡಾಜೆ ಗ್ರಾಮ ಸಮಿತಿಯ ಪರವಾಗಿ ಪುಷ್ಪರಾಜ ರೈ ಕಲ್ಲ ಹಿತ್ತಿಲು, ಕೋಶಾಧಿಕಾರಿ ಮಧು ಶೆಟ್ಟಿ ಹುರ್ತಾಜೆ, ಶಿವರಾಜ್ ರೈ ಸೋಮಂತಡ್ಕ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ ನೈಯಾಲು ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!