23.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!