32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೊಂದಿಗೆ ಪ್ರಾರಂಭಿಸಿ ಮಕ್ಕಳು ಹಾಗೂ ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಸಭಾಧ್ಯಕ್ಷತೆಯನ್ನು ಸುರೇಶ್ ಶೆಟ್ಟಿ ಕುರೆಲ್ಯ ವಹಿಸಿದ್ದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಅಂಗನವಾಡಿ ಕೇಂದ್ರದಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಂಗನವಾಡಿ ಸಹಾಯಕಿ ಇವರಿಗೆ ಬಿಳ್ಕೊಡುವ ಕಾರ್ಯಕ್ರಮ ನಡೆಯಿತು. ಪೋಷಕರು ಬಾಲ ವಿಕಾಸ ಸಮಿತಿ ಸಲಹಾ ಸಮಿತಿ ಊರವರು ಶ್ರೀ ಶಕ್ತಿ ಸ್ವ ಸಹಾಯ ಸಂಜೀವಿನಿ ಸಂಘಗಳು, ಹಳೆ ವಿದ್ಯಾರ್ಥಿಗಳು ಸೇರಿ ಸುಮಾರು 25,000 ಮೌಲ್ಯ ವೆಚ್ಚದ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಲಾಯಿತು. ಸುನಂದ ರವರ ಹೆತ್ತವರು ಕೂಡ ಉಡುಗೊರೆ ನೀಡಿ ಸಹಕರಿಸಿದರು. ಇದೇ ವೇಳೆ ಆಶಾ ಕಾರ್ಯ ಕರ್ತೆ ಬಾಲ ವಿಕಾಸ ಸಮಿತಿ ಸದಸ್ಯೆ ನಿವೃತ್ತರಾಗಿರುವ ಗುಲಾಬಿ ಗೌರವಿಸಲಾಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಪಿ.ಡಬ್ಲ್ಯೂ.ಡಿ ಇಂಜಿನಿಯರ್ ಸೂರಜ್ ಹಾನಿಂಜ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಹೇಮಂತ್, ಶ್ರೀಮತಿ ಪದ್ಮಾವತಿ ಗಣ್ಯರಾದ, ಗಣ್ಯರಾದ ರಾಮಚಂದ್ರರಾವ್ ಅಮನಬೈಲು, ಮಹಿಳಾ ಪೊಲೀಸ್ ಸಿಬ್ಬಂದಿ ಜಯಶ್ರೀ ಸಲಹಾ ಸಮಿತಿ ಗೌರವಾಧ್ಯಕ್ಷ ಚಂದ್ರ ಪೂಜಾರಿ ಹಾಗು ಸದಸ್ಯರುರುಗಳಾದ ವಿಶ್ವನಾಥ ಲಿಂಗಾಯಿತ, ಎಂ ಸಿ ನಾರಾಯಣ ಗೌಡ, ಜಗದೀಶ್ ಪಿಎನ್, ಹರಿಪ್ರಸಾದ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ದಕ್ಷಿಣ ಕನ್ನಡ ಜಿಲ್ಲೆ,, ಇಂದಿರಾ ವಿಶ್ವನಾಥ್ ಮೂಲ್ಯ,, ಶಿವಪ್ರಸಾದ್ ಕಜ್ಜೆಲು, ಕೊರಗಪ್ಪ ನಾಯ್ಕ ಗಿಳಿಕಾಪು, ಅಂಗನವಾಡಿ ಕಾರ್ಯಕರ್ತೆ ವಸುಂದರಾ ಮರಾಠೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು, ಕಾರ್ಯಕ್ರಮದಲ್ಲಿ ಸಹ ಸಮಿತಿಯ ಅಧ್ಯಕ್ಷ ಶಿವಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಸ್ಪೂರ್ತಿ, ಚೆನ್ನಪ್ಪ ಶೆಟ್ಟಿ ತಾರೆದೊಟ್ಟು, ಅಬ್ದುಲ್ ಖಾದರ್, ಚಂದ್ರಾವತಿ, ಸಂಪ, ಸುಜಾತ, ಊರವರು ಮಕ್ಕಳ ಪೋಷಕರು ಶ್ರೀ ಶಕ್ತಿ ಸ್ವಸಾಯ ಸಂಜೀವಿನಿ ತಂಡದ ಅಧ್ಯಕ್ಷರು,ಕಾರ್ಯದರ್ಶಿಗಳು, ಸದಸ್ಯರುಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಾಲ ವಿಕಾಸ ಬಾಲ ವಿಕಾಸ ಸಮಿತಿಯ ಸಮಿತಿಯ ಅಧ್ಯಕ್ಷೆ ಶೃತಿ ಕಾರ್ಯಕ್ರಮವನ್ನು ನಿರೂಪಿಸಿದರು ಅಂಗನವಾಡಿ ಕಾರ್ಯಕರ್ತೆ ಮನಿತಾ.ಸಿ.ಶೆಟ್ಟಿ ಸ್ವಾಗತಿಸಿ ವಂದಿಸಿದರು, ಅನುಷಾ, ಭವ್ಯ, ಜಯಶ್ರೀ, ಅರುಣ ಎಸ್. ಮೆಹಂದಾ ಮೆಹಂದಳೆ ಸಹಕರಿಸಿದರು.

Related posts

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!