September 6, 2026
ಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ. 30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು.

ಇದೀಗ ಡಿಸೆಂಬರ್ 30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ ಎಂ ಎಸ್ ನ ರಾಜ್ಯ ಕಾರ್ಯದರ್ಶಿ ಎ ಜೈ ರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
error: Content is protected !!