23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ. 30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು.

ಇದೀಗ ಡಿಸೆಂಬರ್ 30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ ಎಂ ಎಸ್ ನ ರಾಜ್ಯ ಕಾರ್ಯದರ್ಶಿ ಎ ಜೈ ರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ

Related posts

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!