September 6, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
error: Content is protected !!