ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ


ಉಜಿರೆ: ದೈಹಿಕ ಕ್ಷಮತೆಯು ಎಲ್ಲರಿಗೂ ಸಹ ಅತ್ಯವಶ್ಯಕ. ಪ್ರತಿಯೊಬ್ಬರಿಗೂ ಕ್ರೀಡಾ ಮನೋಭಾವನೆ ಇದ್ದರೆ ಜೀವನದಲ್ಲಿ ಶಿಸ್ತು ಸಂಯಮಗಳು ತಾನಾಗಿ ಬರುತ್ತವೆ. ಕೇವಲ ಸ್ಪರ್ಧೆಗಾಗಿ ಕ್ರೀಡೆಯಾಗಬಾರದು. ಕ್ರೀಡೆ ನಮ್ಮ ಜೀವನದ ಅವಿಭಾಜ್ಯ
ಅಂಗವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಮಟ್ಟದ ಶಿಕ್ಷಣ ಸಂಸ್ಥೆಯ
ಹೆಸರನ್ನು ರಾಷ್ಟ್ರೀಯ ಮಟ್ಟದ ತನಕ ಕೊಂಡೊಯ್ದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳಿಗೆ ಮಾದರಿ ಎಂದು ಹೇಳಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕರುಣಾಕರ ಶೆಟ್ಟಿಯವರು ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣ ಮಾಡಿ ಮಾತನಾಡಿದರು. ಆರೋಗ್ಯವಂತರಾಗಿ ಬದುಕಲು ಕ್ರೀಡೆಗಳಲ್ಲಿ ಎಲ್ಲರೂ ಭಾಗವಹಿಸಬೇಕು, ದೈಹಿಕ ಕ್ಷಮತೆ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆ ಅತಿ ಮುಖ್ಯ.
ಕ್ರೀಡೆಯಲ್ಲಿ ತೊಡಗಿಸಿಕೊಂಡವರು ಜೀವನದಲ್ಲಿ ಸೋಲನ್ನು ಒಪ್ಪಿಕೊಳ್ಳುವ ಗುಣ ಹೊಂದಿ ಸಾರ್ಥಕ ಜೀವನ ಕಾಣುತ್ತಾರೆ ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಧ. ಮಂ. ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವಿಶ್ವನಾಥ ಪಿ., ಎಸ್.ಡಿ.ಎಂ. ಕ್ರೀಡಾಸಂಘದ ಕಾರ್ಯದರ್ಶಿ ರಮೇಶ್ ಹೆಚ್, ಎಸ್.ಡಿ.ಎಂ. ಪ. ಪೂ. ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ. ಹಾಗೂ ಎಸ್.ಡಿ.ಎಂ. ಪ. ಪೂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಪೂಂಜ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ನಡೆದ ಆಕರ್ಷಕ ಪಥನ ಸಂಚಲನದಲ್ಲಿ ದ್ವಿತೀಯ ವಿಜ್ಞಾನ ‘ಸಿ’ ವಿ¨ ಪ್ರಥಮ ಬಹುಮಾನ, ಪ್ರಥಮ ವಿಜ್ಞಾನ ‘ಹೆಚ್’ ವಿಭಾಗ ದ್ವಿತೀಯ ಬಹುಮಾನ ಹಾಗೂ ದ್ವಿತೀಯ ವಿಜ್ಞಾನ ‘ಎ’ ವಿಭಾಗ ತೃತೀಯ ಬಹುಮಾನ
ಪಡೆದರು.
ರಾಷ್ಟ್ರೀಯ ಕ್ರೀಡಾಪಟುಗಳಾದ ದರ್ಶನ್, ಪ್ರಣವ್, ಸುಪ್ರಿಯಾ ಹಾಗೂ ಚಂದು ಇವರು ಕ್ರೀಡಾಜ್ಯೋತಿ ಬೆಳಗಿಸಿದರು. ರಾಷ್ಟ್ರೀಯ ಮಟ್ಟದ ನೆಟ್‌ಬಾಲ್ ಕ್ರೀಡಾಪಟು ದೀಪ್ತಿ ಹೆಚ್.ಎಸ್. ರವರು ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಂಕಿತಾ ಎಮ್.ಕೆ. ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ರಾಜು ಎ.ಎ. ವಂದಿಸಿದರು. ಕನ್ನಡ ಉಪನ್ಯಾಸಕ ಡಾ. ಮಹಾವೀರ್ ಜೈನ್ ನಿರೂಪಿಸಿದರು.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!