25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ (Perjury Report) u/s 215 ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದ್ದು 3,923 ಪುಟಗಳ ದಾಖಲೆಗಳಲ್ಲಿ ಕೆಲವೊಂದು ವರದಿಯ ಪ್ರತಿಗಳನ್ನು ನೀಡಲು ಸಮ್ಮತಿಸಿರುವುದಾಗಿ ಜಯಂತ್ ಟಿ ಪರವಾಗಿ ವಾದ ಮಂಡಿಸಿದ್ದ ಬೆಂಗಳೂರಿನ ಹಿರಿಯ ನ್ಯಾಯವಾದಿ ದೊರೆರಾಜು ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಜಯಂತ್ ಟಿ, ಗಿರೀಶ್ ಮಟ್ಟಣ್ಣನವರ್ ಹಾಗೂ ಇತರರಿಗೆ ನಿರಂತರವಾಗಿ ನೋಟೀಸ್ ನೀಡುತ್ತಾ ಬಂದಿತ್ತು ಹಾಜರಾಗದಿದ್ದರೆ‌ ಬಂಧಿಸುವುದಾಗಿ ನೋಟೀಸ್ ನೀಡಿದ್ದರು. ಇದಾದ ಬಳಿಕ ಎಸ್.ಐ.ಟಿ ನ್ಯಾಯಾಲಯದ ಮುಂದೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು.

ತಮಗೆ ಆರೋಪಿ ಎಂದು ನೋಟೀಸ್ ನೀಡಿರುವ ಹಿನ್ನಲೆಯಲ್ಲಿ ಎಸ್.ಐ.ಟಿ ಸಲ್ಲಿಸಿರುವ ವರದಿಯನ್ನು ತಮಗೆ ನೀಡುವಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅದನ್ನು ನೀಡಲು ನಿರಾಕರಿಸಿತ್ತು. ಎಸ್.ಐ.ಟಿ ವರದಿಯನ್ನು ಬಹಿರಂಗ ಪಡಿಸದಂತೆ ಕೇಳಿಕೊಂಡಿರುವ ಕಾರಣದಿಂದ ಈ ವರದಿಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.

ಈ ಹಿನ್ನಲೆಯಲ್ಲಿ ಬೆಂಗಳೂರಿನ ಹಿರಿಯ ನ್ಯಾಯವಾದಿ ದೊರೆರಾಜು ಪ್ರಕರಣದ ಬಗ್ಗೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಮುಂದೆ ಜಯಂತ್ ಟಿ ಪರವಾಗಿ ವಕಾಲತು ಸಲ್ಲಿಸಿದ್ದು ಎಸ್.ಐ‌.ಟಿ ಸಲ್ಲಿಸಿದ್ದ ವರದಿಯನ್ನು ನೀಡುವಂತೆ ವಿನಂತಿಸಿತ್ತು.

ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದ ಜಯಂತ್ ಪರ ನ್ಯಾಯವಾದಿಗಳು ಎಸ್.ಐ.ಟಿ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ, ಚಿನ್ನಯ್ಯ ಹಾಗೂ ಜಯಂತ್ ತಲೆ ಬುರುಡೆಯನ್ನು ನ್ಯಾಯಾಲಯಕ್ಕೆ ತಂದಿರುವುದು ಯಾವುದೋ ದುರುದ್ದೇಶದಿಂದ ಅಲ್ಲ ಸದುದ್ದೇಶದಿಂದಲೇ ಇಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಗಮನಸೆಳೆಯಲು ಬಂಗ್ಲೆ ಗುಡ್ಡದ ಕಾಡಿನಿಂದ ಈ ತಕೆ ಬುರುಡೆಯನ್ನು ತಂದಿದ್ದಾರೆ. ಅದಕ್ಕಾಗಿ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಜಯಂತ್ ಅವರಿಗೆ 9 ನೋಟೀಸ್ ಗಳನ್ನು ನೀಡಲಾಗಿದ್ದು ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಹೇಳಿದ್ದಾರೆ. ಹೀಗಿರುವಾಗ ಅವರ ವಿರುದ್ದ ಸಲ್ಲಿಕೆಯಾಗಿರುವ ವರದಿಯನ್ನು ಪಡೆಯುವುದು ಅವರ ಮೂಲಭೂತ ಹಕ್ಕಾಗಿದೆ, ಇದು ಯಾವುದೇ ರೀತಿಯಲ್ಲಿ ದೇಶದ ಭದ್ರತೆಯ ವಿಚಾರ ಅಥವಾ ಇನ್ಯಾವುದೇ ಗುಪ್ತ ವಿಚಾರವಾಗಿರುವುದಿಲ್ಲ. ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದಿರುವುದಲ್ಲದೆ ಸುಪ್ರೀಂಕೋರ್ಟ್ ಹಾಗೂ ವಿವಿಧ ಹೈಕೋರ್ಟ್ ಗಳು ಈ ಬಗ್ಗೆ ನೀಡಿರುವ ತೀರ್ಪು ಗಳನ್ನು ನ್ಯಾಯಾಲಯದ ಗಮನಕ್ಕೆ ತಂದು ತಮ್ಮ ಕಕ್ಷಿದಾರರಿಗೆ ಕಾನೂನಿನ ರಕ್ಷಣೆ ಪಡೆಯಲು ಈ ದಾಖಲೆಗಳು ಅಗತ್ಯವಾಗಿದೆ ಎಂಬ ವಾದವನ್ನು ಮಂಡಿಸಿದ್ದು ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಎಸ್.ಐ.ಟಿ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ (Perjury Report) u/s 215 ಅಡಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿನ 183 ಹೇಳಿಕೆ ಹಾಗೂ ಕೆಲವೊಂದು ಗೌಪ್ಯ ಮಾಹಿತಿಗಳನ್ನು ಬಿಟ್ಟು ಉಳಿದ ವರದಿಗಳ ಪ್ರತಿಗಳನ್ನು ಮಾತ್ರ ಕಕ್ಷಿದಾರರಿಗೆ ನೀಡುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ.

Related posts

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!