September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20 ಕ್ಕೆ (Perjury Report) u/s 215 ಅಡಿಯಲ್ಲಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರ ಮುಂದೆ ಡಿ.2 ರಂದು ಎಸ್ಐಟಿ ಪರ ಸರಕಾರಿ ವಕೀಲರಾದ ದಿವ್ಯರಾಜ್ ವಾದ ಮಾಡಿದರು.ವಾದದಲ್ಲಿ 39/2025 ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತನಿಖೆ ಮುಗಿಯದ ಕಾರಣದಿಂದ ಚಾರ್ಜ್ ಶೀಟ್ ಬದಲು BNS u/s 215 ಅಡಿಯಲ್ಲಿ ವರದಿ ನೀಡಿದ್ದು.ಈ ವರದಿಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರೋಪಿಗಳ ವಿರುದ್ದ ಎಫ್ಎಸ್ಎಲ್ ವರದಿ ಮತ್ತು ಇತರ ದಾಖಲೆಗಳ ಮೂಲಕ ವಿವರಿಸಲಾಗಿದೆ.ಇದರಿಂದ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಎಂದು ಹಲವು ಅಂಶಗಳನ್ನು ಮುಂದಿಟ್ಟು ಸರಕಾರಿ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಬಳಿಕ ಸರಕಾರಿ ವಕೀಲರು ಮುಂದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದು. ಈ ಬಗ್ಗೆ ನ್ಯಾಯಲಯ ಮುಂದಿನ ಡಿ.6 ಕ್ಕೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya
error: Content is protected !!