23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಮಹಾಸಭೆ ಮತ್ತು ತರಬೇತಿಯನ್ನು ಸಾನ್ ತೋಮ್ ಟವರ್ ಬೆಳ್ತಂಗಡಿ ಇಲ್ಲಿ ಡಿ.02 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಹಿಂದಿನ ಸಭೆಯ ವರದಿಯನ್ನು ಮತ್ತು ಪ್ರಸ್ತುತ ವರ್ಷದಲ್ಲಿ ನಡೆಸಿದ ಕೆಲಸ ಕಾರ್ಯಗಳ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಉಷಾರವರು ಮಂಡಿಸಿದರು. 2024-2025 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಖಜಾಂಚಿ ಶ್ರೀಮತಿ ಎಲಿಯಮ್ಮ ತೋಮಸ್ ಮಂಡಿಸಿದರು. ಹಿಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ವಂದನೀಯ ಫಾದರ್ ಜೋಸ್ ಆಯಾಂಕುಡಿ ಇವರು ಧರ್ಮ ಗುರುಗಳಾಗಿ 25 ವರ್ಷ ಪೂರೈಸಿದ ನೆನಪಿಗಾಗಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿನ್ಸೆಂಟ್ ಡಿಸೋಜ, ಜೀವ ವಿಮಾ ಅಭಿವೃದ್ಧಿ ಅಧಿಕಾರಿ, ಇವರು ಜೀವ ವಿಮೆ, ವಾಹನ ವಿಮೆ, ಆರೋಗ್ಯ ವಿಮೆ ಮತ್ತು ಅಪಘಾತ ವಿಮಾ ಸೌಲಭ್ಯಗಳ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ರವರು ಒಕ್ಕೂಟದ ಬಲವರ್ಧನೆಗಾಗಿ ಪ್ರತಿ ಯೊಬ್ಬ ಸದಸ್ಯರು ಜವಾಬ್ದಾರಿಯುತವಾಗಿ ಶ್ರಮಿಸಬೇಕು ಎಂದು ತಿಳಿಸಿದರು. ಉದಯ ಮಹಾಸಂಘ ಗಂಡಿಬಾಗಿಲು ಇದರ ಕಾರ್ಯದರ್ಶಿ ಶ್ರೀಮತಿ ಮಿನಿ ಸ್ವಾಗತಿಸಿದರು. ಅರುಣೋದಯ ಮಹಾಸಂಘದ ಸದಸ್ಯೆ ಶ್ರೀಮತಿ ಸಾಲಿ ವಂದಿಸಿದರು. ಅರುಣೋದಯ ಮಹಾ ಸಂಘದ ಸದಸ್ಯರು ಪ್ರಾರ್ಥನೆಯನ್ನು ಹಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!