25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!