24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಶತಮಾನದ ಹಿಂದೆ ಕೇರಳದ ವರ್ಕುಲದಲ್ಲಿ ನಡೆದ ಗುರು ಗಾಂಧಿ ಸಂವಾದ ಕಾರ್ಯಕ್ರಮದ ಸವಿನೆನಪಿಗಾಗಿ ಡಿ.3 ರಂದು ಮಂಗಳೂರಿನ ವಿಶ್ವವಿದ್ಯಾ ನಿಲಯದ ಆವರಣದಲ್ಲಿ ನಡೆಯುವ ಬೃಹತ್ ಸಮಾವೇಶ ಮತ್ತು ಡಿ.7 ರಂದು ಬೆಳ್ತಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಅಂಗವಾಗಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆ ರೆಂಕೆದ ಗುತ್ತು ಭಾಸ್ಕರ ರವರ ನಿವಾಸದಲ್ಲಿ ನಡೆಯಿತು.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮೇಲಿನ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಮಲಾಕ್ಷ ಪೂಜಾರಿ, ಗಂಗಾಧರ್, ಭಾಸ್ಕರ್ ಪೂಜಾರಿ, ಪವನ್ ಬಂಗೇರ, ಚೇತನ್ , ಶ್ರೀಮತಿ ಗೀತಾ, ಪ್ರೇಮಾ, ಪೂರ್ಣಿಮಾ, ಹಾಗೂ ಇತರ ಗಣ್ಯರು ಹಾಜರಿದ್ದರು. ಕರುಣಾಕರ್ ಪೂಜಾರಿ ಸ್ವಾಗತಿಸಿ, ಸಚಿನ್ ಸಾಲಿಯಾನ್ ವಂದಿಸಿದರು.

Related posts

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!