July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಜಿಲ್ಲಾ ಮಹಿಳಾ ಅಭ್ಯಾಸ ವರ್ಗವು ಡಿ.2 ರಂದು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಜರುಗಿತು.

ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪುಪ್ಪಾವತಿ ಆರ್. ಶೆಟ್ಟಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಸಹಕಾರಿ ಭಾರತೀಯ ಸಹಕಾರದಿಂದ ಮಹಿಳೆಯರು ಸಾಧನೆ ಮಾಡಲು ಸಹಕಾರಿಯಾಗಿದೆ. ಅಭ್ಯಾಸ ವರ್ಗದಲ್ಲಿ ದೊರೆಯುವ ಮಾಹಿತಿಯನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಸಹಕಾರ ಭಾರತಿ ರಾಜ್ಯ ಮಹಿಳಾ ಪ್ರಮುಖ್ ವಿದ್ಯಾ ಪೈ ರವರು ಗೌರವವನ್ನು ಸ್ವೀಕರಿಸಿ ಮಾತನಾಡಿ, ಮಹಿಳೆಯರ ಸಾಧನೆಗೆ ಸಹಕಾರ ಭಾರತಿ ಪ್ರೇರಣೆಯಾಗಿದ್ದು, ಉತ್ತಮ ವೇದಿಕೆಗಳನ್ನು ಸಹಕಾರ ಭಾರತಿ ಕಲ್ಪಿಸಿಕೊಡುತ್ತಿದೆ ಎಂದರು.

ವೇದಿಕೆಯಲ್ಲಿ ಸಹಕಾರ ಭಾರತಿ ಮಂಗಳೂರು ತಾಲೂಕು ಮಹಿಳಾ ಪ್ರಮುಖ್ ಲತಾ ಹೆಗ್ಡೆ, ಪುತ್ತೂರು ತಾಲೂಕು ಮಹಿಳಾ ಪ್ರಮುಖ್ ಮೀರಾ ಭಾಸ್ಕರ್ ರೈ, ಕಡಬ ತಾಲೂಕು ಮಹಿಳಾ ಪ್ರಮುಖ್‌ ಭಾರತಿ ದಿನೇಶ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಹಕಾರ ಭಾರತಿ ರಾಷ್ಟ್ರೀಯ ಗ್ರಾಹಕ ಪ್ರಕೋಷ್ಠ ಸಂಚಾಲಕರು ಭಾರತಿ ಭಟ್, ಮಂಗಳೂರು ಶ್ರೀನಿವಾಸ ಮಹಾ ವಿದ್ಯಾಲಯ ಸಂಶೋಧನಾ ಪ್ರಾಧ್ಯಾಪಕರಾದ ಡಾ| ಸುಧಾ ಕೆ. ಭಾಗವಹಿಸಿ ಸಹಕಾರ ಭಾರತೀಯ ಪರಿಚಯ, ಆಡಳಿತ ಮಂಡಳಿಯ ಜವಾಬ್ದಾರಿ ಮತ್ತು ಕರ್ತವ್ಯ ಹಾಗೂ ಮಹಿಳೆಯರ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ಭಾರತಿ ಬಂಟ್ವಾಳ ತಾಲೂಕು ಮಹಿಳಾ ಪ್ರಮುಖ್ ಶಾಂತಾ ಡಿ. ಚೌಟ, ಬೆಳ್ತಂಗಡಿ ತಾಲೂಕು ಪ್ರಮುಖ್ ಭಾರತಿ ಕೆ. ಕಣಿಯೂರು , ದ.ಕ ಜಿಲ್ಲಾ ಸಹಕಾರ ಭಾರತಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಪ್ರಮುಖ್ ಸುಭದ್ರಾ ಎನ್. ರಾವ್ ಪೆರ್ಮಂಕಿ ಸ್ವಾಗತಿಸಿದರು. ಸಹ ಪ್ರಮುಖ್ ಅಮೂಲ್ಯಾ ಶೆಟ್ಟಿ ಕಟೀಲು ವಂದಿಸಿದರು. ಧನ್ಯಾ ಕುಲಾಲ್ ನಿರೂಪಿಸಿದರು.

Related posts

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya
error: Content is protected !!