ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಜಿಲ್ಲಾ ಮಹಿಳಾ ಅಭ್ಯಾಸ ವರ್ಗವು ಡಿ.2 ರಂದು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಜರುಗಿತು.

ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪುಪ್ಪಾವತಿ ಆರ್. ಶೆಟ್ಟಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಸಹಕಾರಿ ಭಾರತೀಯ ಸಹಕಾರದಿಂದ ಮಹಿಳೆಯರು ಸಾಧನೆ ಮಾಡಲು ಸಹಕಾರಿಯಾಗಿದೆ. ಅಭ್ಯಾಸ ವರ್ಗದಲ್ಲಿ ದೊರೆಯುವ ಮಾಹಿತಿಯನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಸಹಕಾರ ಭಾರತಿ ರಾಜ್ಯ ಮಹಿಳಾ ಪ್ರಮುಖ್ ವಿದ್ಯಾ ಪೈ ರವರು ಗೌರವವನ್ನು ಸ್ವೀಕರಿಸಿ ಮಾತನಾಡಿ, ಮಹಿಳೆಯರ ಸಾಧನೆಗೆ ಸಹಕಾರ ಭಾರತಿ ಪ್ರೇರಣೆಯಾಗಿದ್ದು, ಉತ್ತಮ ವೇದಿಕೆಗಳನ್ನು ಸಹಕಾರ ಭಾರತಿ ಕಲ್ಪಿಸಿಕೊಡುತ್ತಿದೆ ಎಂದರು.

ವೇದಿಕೆಯಲ್ಲಿ ಸಹಕಾರ ಭಾರತಿ ಮಂಗಳೂರು ತಾಲೂಕು ಮಹಿಳಾ ಪ್ರಮುಖ್ ಲತಾ ಹೆಗ್ಡೆ, ಪುತ್ತೂರು ತಾಲೂಕು ಮಹಿಳಾ ಪ್ರಮುಖ್ ಮೀರಾ ಭಾಸ್ಕರ್ ರೈ, ಕಡಬ ತಾಲೂಕು ಮಹಿಳಾ ಪ್ರಮುಖ್‌ ಭಾರತಿ ದಿನೇಶ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಹಕಾರ ಭಾರತಿ ರಾಷ್ಟ್ರೀಯ ಗ್ರಾಹಕ ಪ್ರಕೋಷ್ಠ ಸಂಚಾಲಕರು ಭಾರತಿ ಭಟ್, ಮಂಗಳೂರು ಶ್ರೀನಿವಾಸ ಮಹಾ ವಿದ್ಯಾಲಯ ಸಂಶೋಧನಾ ಪ್ರಾಧ್ಯಾಪಕರಾದ ಡಾ| ಸುಧಾ ಕೆ. ಭಾಗವಹಿಸಿ ಸಹಕಾರ ಭಾರತೀಯ ಪರಿಚಯ, ಆಡಳಿತ ಮಂಡಳಿಯ ಜವಾಬ್ದಾರಿ ಮತ್ತು ಕರ್ತವ್ಯ ಹಾಗೂ ಮಹಿಳೆಯರ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ಭಾರತಿ ಬಂಟ್ವಾಳ ತಾಲೂಕು ಮಹಿಳಾ ಪ್ರಮುಖ್ ಶಾಂತಾ ಡಿ. ಚೌಟ, ಬೆಳ್ತಂಗಡಿ ತಾಲೂಕು ಪ್ರಮುಖ್ ಭಾರತಿ ಕೆ. ಕಣಿಯೂರು , ದ.ಕ ಜಿಲ್ಲಾ ಸಹಕಾರ ಭಾರತಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಪ್ರಮುಖ್ ಸುಭದ್ರಾ ಎನ್. ರಾವ್ ಪೆರ್ಮಂಕಿ ಸ್ವಾಗತಿಸಿದರು. ಸಹ ಪ್ರಮುಖ್ ಅಮೂಲ್ಯಾ ಶೆಟ್ಟಿ ಕಟೀಲು ವಂದಿಸಿದರು. ಧನ್ಯಾ ಕುಲಾಲ್ ನಿರೂಪಿಸಿದರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!