22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20 ಕ್ಕೆ (Perjury Report) u/s 215 ಅಡಿಯಲ್ಲಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರ ಮುಂದೆ ಡಿ.2 ರಂದು ಎಸ್ಐಟಿ ಪರ ಸರಕಾರಿ ವಕೀಲರಾದ ದಿವ್ಯರಾಜ್ ವಾದ ಮಾಡಿದರು.ವಾದದಲ್ಲಿ 39/2025 ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತನಿಖೆ ಮುಗಿಯದ ಕಾರಣದಿಂದ ಚಾರ್ಜ್ ಶೀಟ್ ಬದಲು BNS u/s 215 ಅಡಿಯಲ್ಲಿ ವರದಿ ನೀಡಿದ್ದು.ಈ ವರದಿಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರೋಪಿಗಳ ವಿರುದ್ದ ಎಫ್ಎಸ್ಎಲ್ ವರದಿ ಮತ್ತು ಇತರ ದಾಖಲೆಗಳ ಮೂಲಕ ವಿವರಿಸಲಾಗಿದೆ.ಇದರಿಂದ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಎಂದು ಹಲವು ಅಂಶಗಳನ್ನು ಮುಂದಿಟ್ಟು ಸರಕಾರಿ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಬಳಿಕ ಸರಕಾರಿ ವಕೀಲರು ಮುಂದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದು. ಈ ಬಗ್ಗೆ ನ್ಯಾಯಲಯ ಮುಂದಿನ ಡಿ.6 ಕ್ಕೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

Related posts

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!