23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20 ಕ್ಕೆ (Perjury Report) u/s 215 ಅಡಿಯಲ್ಲಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರ ಮುಂದೆ ಡಿ.2 ರಂದು ಎಸ್ಐಟಿ ಪರ ಸರಕಾರಿ ವಕೀಲರಾದ ದಿವ್ಯರಾಜ್ ವಾದ ಮಾಡಿದರು.ವಾದದಲ್ಲಿ 39/2025 ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತನಿಖೆ ಮುಗಿಯದ ಕಾರಣದಿಂದ ಚಾರ್ಜ್ ಶೀಟ್ ಬದಲು BNS u/s 215 ಅಡಿಯಲ್ಲಿ ವರದಿ ನೀಡಿದ್ದು.ಈ ವರದಿಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರೋಪಿಗಳ ವಿರುದ್ದ ಎಫ್ಎಸ್ಎಲ್ ವರದಿ ಮತ್ತು ಇತರ ದಾಖಲೆಗಳ ಮೂಲಕ ವಿವರಿಸಲಾಗಿದೆ.ಇದರಿಂದ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಎಂದು ಹಲವು ಅಂಶಗಳನ್ನು ಮುಂದಿಟ್ಟು ಸರಕಾರಿ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಬಳಿಕ ಸರಕಾರಿ ವಕೀಲರು ಮುಂದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದು. ಈ ಬಗ್ಗೆ ನ್ಯಾಯಲಯ ಮುಂದಿನ ಡಿ.6 ಕ್ಕೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!