22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya
error: Content is protected !!