23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!