22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಶತಮಾನದ ಹಿಂದೆ ಕೇರಳದ ವರ್ಕುಲದಲ್ಲಿ ನಡೆದ ಗುರು ಗಾಂಧಿ ಸಂವಾದ ಕಾರ್ಯಕ್ರಮದ ಸವಿನೆನಪಿಗಾಗಿ ಡಿ.3 ರಂದು ಮಂಗಳೂರಿನ ವಿಶ್ವವಿದ್ಯಾ ನಿಲಯದ ಆವರಣದಲ್ಲಿ ನಡೆಯುವ ಬೃಹತ್ ಸಮಾವೇಶ ಮತ್ತು ಡಿ.7 ರಂದು ಬೆಳ್ತಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಅಂಗವಾಗಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆ ರೆಂಕೆದ ಗುತ್ತು ಭಾಸ್ಕರ ರವರ ನಿವಾಸದಲ್ಲಿ ನಡೆಯಿತು.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮೇಲಿನ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಮಲಾಕ್ಷ ಪೂಜಾರಿ, ಗಂಗಾಧರ್, ಭಾಸ್ಕರ್ ಪೂಜಾರಿ, ಪವನ್ ಬಂಗೇರ, ಚೇತನ್ , ಶ್ರೀಮತಿ ಗೀತಾ, ಪ್ರೇಮಾ, ಪೂರ್ಣಿಮಾ, ಹಾಗೂ ಇತರ ಗಣ್ಯರು ಹಾಜರಿದ್ದರು. ಕರುಣಾಕರ್ ಪೂಜಾರಿ ಸ್ವಾಗತಿಸಿ, ಸಚಿನ್ ಸಾಲಿಯಾನ್ ವಂದಿಸಿದರು.

Related posts

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya
error: Content is protected !!