September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20 ಕ್ಕೆ (Perjury Report) u/s 215 ಅಡಿಯಲ್ಲಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರ ಮುಂದೆ ಡಿ.2 ರಂದು ಎಸ್ಐಟಿ ಪರ ಸರಕಾರಿ ವಕೀಲರಾದ ದಿವ್ಯರಾಜ್ ವಾದ ಮಾಡಿದರು.ವಾದದಲ್ಲಿ 39/2025 ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತನಿಖೆ ಮುಗಿಯದ ಕಾರಣದಿಂದ ಚಾರ್ಜ್ ಶೀಟ್ ಬದಲು BNS u/s 215 ಅಡಿಯಲ್ಲಿ ವರದಿ ನೀಡಿದ್ದು.ಈ ವರದಿಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರೋಪಿಗಳ ವಿರುದ್ದ ಎಫ್ಎಸ್ಎಲ್ ವರದಿ ಮತ್ತು ಇತರ ದಾಖಲೆಗಳ ಮೂಲಕ ವಿವರಿಸಲಾಗಿದೆ.ಇದರಿಂದ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಎಂದು ಹಲವು ಅಂಶಗಳನ್ನು ಮುಂದಿಟ್ಟು ಸರಕಾರಿ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಬಳಿಕ ಸರಕಾರಿ ವಕೀಲರು ಮುಂದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದು. ಈ ಬಗ್ಗೆ ನ್ಯಾಯಲಯ ಮುಂದಿನ ಡಿ.6 ಕ್ಕೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

Related posts

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
error: Content is protected !!