23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಮಹಾಸಭೆ ಮತ್ತು ತರಬೇತಿಯನ್ನು ಸಾನ್ ತೋಮ್ ಟವರ್ ಬೆಳ್ತಂಗಡಿ ಇಲ್ಲಿ ಡಿ.02 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಹಿಂದಿನ ಸಭೆಯ ವರದಿಯನ್ನು ಮತ್ತು ಪ್ರಸ್ತುತ ವರ್ಷದಲ್ಲಿ ನಡೆಸಿದ ಕೆಲಸ ಕಾರ್ಯಗಳ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಉಷಾರವರು ಮಂಡಿಸಿದರು. 2024-2025 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಖಜಾಂಚಿ ಶ್ರೀಮತಿ ಎಲಿಯಮ್ಮ ತೋಮಸ್ ಮಂಡಿಸಿದರು. ಹಿಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ವಂದನೀಯ ಫಾದರ್ ಜೋಸ್ ಆಯಾಂಕುಡಿ ಇವರು ಧರ್ಮ ಗುರುಗಳಾಗಿ 25 ವರ್ಷ ಪೂರೈಸಿದ ನೆನಪಿಗಾಗಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿನ್ಸೆಂಟ್ ಡಿಸೋಜ, ಜೀವ ವಿಮಾ ಅಭಿವೃದ್ಧಿ ಅಧಿಕಾರಿ, ಇವರು ಜೀವ ವಿಮೆ, ವಾಹನ ವಿಮೆ, ಆರೋಗ್ಯ ವಿಮೆ ಮತ್ತು ಅಪಘಾತ ವಿಮಾ ಸೌಲಭ್ಯಗಳ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ರವರು ಒಕ್ಕೂಟದ ಬಲವರ್ಧನೆಗಾಗಿ ಪ್ರತಿ ಯೊಬ್ಬ ಸದಸ್ಯರು ಜವಾಬ್ದಾರಿಯುತವಾಗಿ ಶ್ರಮಿಸಬೇಕು ಎಂದು ತಿಳಿಸಿದರು. ಉದಯ ಮಹಾಸಂಘ ಗಂಡಿಬಾಗಿಲು ಇದರ ಕಾರ್ಯದರ್ಶಿ ಶ್ರೀಮತಿ ಮಿನಿ ಸ್ವಾಗತಿಸಿದರು. ಅರುಣೋದಯ ಮಹಾಸಂಘದ ಸದಸ್ಯೆ ಶ್ರೀಮತಿ ಸಾಲಿ ವಂದಿಸಿದರು. ಅರುಣೋದಯ ಮಹಾ ಸಂಘದ ಸದಸ್ಯರು ಪ್ರಾರ್ಥನೆಯನ್ನು ಹಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!