23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!