22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!