September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ ಸಹಾಯ ನೀಡಲಾಯಿತು.

ಇವರು ಕಟ್ಟಡ ಕೂಲಿ ಕಾರ್ಮಿಕರಾಗಿದ್ದು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಸಕ್ರಿಯ ಜವಾಬ್ದಾರಿಯುತರಾಗಿ ನ.7 ರಂದು ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ಬಲಗಾಲಿನ ಮೊಣಗಂಟಿಗೆ ತೀವ್ರ ವಾದ ಪೆಟ್ಟು ಬಿದ್ದಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುತ್ತಾರೆ. ಆದ್ದರಿಂದ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಆರ್ಥಿಕ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಕರಿಯ ಗೌಡ ಹಾಗೂ ದಿಲೀಪ್ ಕುಮಾರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಎಮ್.ಸಿ ಹಾಸ್ಪಿಟಲ್ ಮಂಗಳೂರು, ಶ್ರೀ ವಿದ್ಯಾಗಣಪತಿ ಅಧ್ಯಕ್ಷ ತೀಕ್ಷಿತ್ ಕೆ ಕಲ್ಬೆಟ್ಟು, ಉಪಾಧ್ಯಕ್ಷ ಯೋಗೀಶ್ ಗೌಡ ದರ್ಖಸ್, ಹರೀಶ್ ಗೌಡ, ಪದ್ಮನಾಭ ಗೌಡ ಕೆಮ್ಮಟೆ, ಶಿವರಾಮ ಗೌಡ , ಜನಾರ್ಧನ ಗೌಡ ವಿದ್ಯಾನಗರ, ಕಮಲಾಕ್ಷ ಗೌಡ ಕೊಟ್ರಡ್ಕ ಮತ್ತು ಗ್ರಾಮಸ್ಥರು ಉಪಸ್ಥಿರಿದ್ದರು.

Related posts

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya
error: Content is protected !!