23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಲಾಯಿಲ: ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಮುಖ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕೌಶಲ್ಯವೂ ಮುಖ್ಯ. ಆವಾಗ ಉತ್ತಮ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದ ಪ್ರಾಂಶುಪಾಲ ರಮೇಶ್ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 25 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರು ಜಯಶ್ರೀ ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya
error: Content is protected !!