22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಲಾಯಿಲ: ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಮುಖ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕೌಶಲ್ಯವೂ ಮುಖ್ಯ. ಆವಾಗ ಉತ್ತಮ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದ ಪ್ರಾಂಶುಪಾಲ ರಮೇಶ್ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 25 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರು ಜಯಶ್ರೀ ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya
error: Content is protected !!