25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಸ್ ಡಿ ಎಮ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಉಪನ್ಯಾಸ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮತ್ತು ವೈದ್ಯಕೀಯ ಅಧೀಕ್ಷಕಿಯಾದ ಡಾ. ಪ್ರಕೃತಿ ರವರು ಎಚ್ಐವಿ ಸೋಂಕಿನ ಲಕ್ಷಣಗಳು, ತಡೆಗಟ್ಟುವ ಕ್ರಮಗಳು,, ಸುರಕ್ಷಾ ಕ್ರಮಗಳು, ಸೋಂಕಿನ ತಡೆಗಟ್ಟುವಿಕೆಗೆ ಸರಕಾರದ ಯೋಜನೆಗಳು ಮುಂತಾದ ವಿಷಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ರಾಜೇಶ್ ಬಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹಯೋಜನಾಧಿಕಾರಿ ಶೋಭಾ ಪಿ, ಎನ್ಎಸ್ಎಸ್ ನಾಯಕ ಸಂಕೇತ್, ನಾಯಕಿ ರಾಶಿಕ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಸುಪೇಕ್ಷಾ ಸ್ವಾಗತಿಸಿ, ಪಲ್ಲವಿ ವಂದಿಸಿದರು. ಧನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!