23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನೀತಾ MBBS, MD ಅವರು ಆಗಮಿಸಿದರು. ಸಮಾರಂಭಕ್ಕೆ ಅಧ್ಯಕ್ಷತೆಯನ್ನು ಎಸ್‌.ಡಿ‌.ಎಂ. ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿದರು.

ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ವಿಶ್ವ ಏಡ್ಸ್‌ ದಿನದ ಸಂಕೇತವಾದ ಕೆಂಪು ರಿಬನ್‌ ಧರಿಸಿ, ರೋಗಿ–ಸ್ನೇಹಿ ಸಮಾಜ ನಿರ್ಮಾಣದ ಬದ್ಧತೆಯನ್ನು ತೋರಿಸಿದರು. ಅವರು ಮಾನವ ಸರಪಳಿ ರೂಪಿಸಿ, ಏಡ್ಸ್‌ ಜಾಗೃತಿಯ ಸಂಕೇತವಾದ ಬೋ ಆಕಾರದ ರಚನೆಯನ್ನು ಕೂಡ ಮಾಡಿದರು. ಈ ವಿಶೇಷ ಆಕೃತಿ ಕಾರ್ಯಕ್ರಮಕ್ಕೆ ಮತ್ತಷ್ಟು ಸಂದೇಶಾತ್ಮಕತೆ ಮತ್ತು ಗಂಭೀರತೆಯನ್ನು ನೀಡಿತು.

ಏಡ್ಸ್‌ ಕುರಿತು ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕವು ಪ್ರೇಕ್ಷಕರ ಮನ ಸೆಳೆಯಿತು. ಸಮಾಜದಲ್ಲಿ ಏಡ್ಸ್‌ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ ಜಾಗೃತಿ ಹರಡುವಲ್ಲಿ ಈ ನಾಟಕ ಪರಿಣಾಮಕಾರಿ ಸಂದೇಶ ನೀಡಿತು.

ಎನ್‌.ಎಸ್‌.ಎಸ್‌. ಕಾರ್ಯಕ್ರಮಾಧಿಕಾರಿ ಡಾ. ಶಾಲ್ಮಲಿ ಸುನಿಲ್ ಸ್ವಾಗತಿಸಿದರು. ಗುರುಚರಣ್ ಧನ್ಯವಾದವಿತ್ತರು. ಸಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!