25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

ಬೆಳ್ತಂಗಡಿ: ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ತರಬೇತಿಯು ಡಿ.2-3ರಂದು ಜರುಗಿದ್ದು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಮಡಂತ್ಯಾರು ಪಂಚಾಯತ್ ನ ಅಧ್ಯಕ್ಷೆ ರೂಪ ಎಸ್, ಪಿಡಿಓ ಶ್ರೀನಿವಾಸ್ ರವರು ಭಾಗವಹಿಸುತ್ತಾರೆ.

ಭಾರತ ಸರ್ಕಾರದ ಪಂಚಾಯತ್ ರಾಜ್ ಸೂಚನೆಯಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 173 ಗ್ರಾಮ ಪಂಚಾಯಿತಿಗಳನ್ನು ‘ಪಂಚಾಯಿತಿ ಕಲಿಕಾ ಕೇಂದ್ರ” (Panchayat Learning Centre – PLC) ಗಳನ್ನು ಗುರುತಿಸಿದ್ದು, ಈ ಪಂಚಾಯಿತಿ ಕಲಿಕಾ ಕೇಂದ್ರಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉತ್ತಮ ಕಾರ್ಯಕ್ಷಮತೆ ಕಲಿಕೆಯ ಅವಕಾಶ ಕಲ್ಪಿಸುವುದು ಇಲ್ಲಿನ ಪ್ರಮುಖ ಆಶಯವಾಗಿದೆ. ಈಗಾಗಲೇ ತಮ್ಮ ಜಿಲ್ಲೆಯಲ್ಲಿ ತಮ್ಮ ಶಿಫಾರಸ್ಸಿನಂತೆ ಈಗಾಗಲೇ ಉತ್ತಮ ಕೆಲಸ ನಿರ್ವಹಣೆ ಮಾಡಿರುವ, ಪಂಚಾಯತ್ ರಾಜ್ ಆಶಯಕ್ಕೆ ಅನುಗುಣವಾಗಿ ವಿನೂತನ ಚಟುವಟಿಕೆಗಳನ್ನು ಕೈಗೊಂಡಿರುವ ಗ್ರಾಮ ಪಂಚಾಯಿತಿಗಳನ್ನು ಪಂಚಾಯಿತಿ ಕಲಿಕಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಲಾಗಿದೆ. ಈ ಪಂಚಾಯಿತಿ ಕಲಿಕಾ ಕೇಂದ್ರಗಳಲ್ಲಿ ತರಬೇತಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ.

ಪ್ರಸ್ತುತ ಈ ಪಂಚಾಯಿತಿ ಕಲಿಕಾ ಕೇಂದ್ರಗಳಲ್ಲಿ ಆಗಿರುವ ವಿನೂತನ ವಿಶಿಷ್ಟ ಕಾರ್ಯಚಟುವಟಿಕೆಗಳ ಯಶೋಗಾಥೆಗಳನ್ನು ಲಿಖಿತ ರೂಪದಲ್ಲಿ ದಾಖಲಿಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಪಂಚಾಯಿತಿ ಕಲಿಕಾ ಕೇಂದ್ರಗಳನ್ನು ಕುರಿತು ವಿಷಯ ಪರಿಚಯ ಮಾಡುವುದು ಮತ್ತು ಯಶೋಗಾಥೆಗಳು ದಾಖಲೀಕರಣ ಮಾಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!