23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು 31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ.

ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya
error: Content is protected !!