23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಬೆಳ್ತಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಕಾಲೇಜು ವಾರ್ಷಿಕೋತ್ಸವವು ಡಿ.1 ರಂದು ಕಾಲೇಜು ಆವರಣದಲ್ಲಿ ನೆರವೇರಿತು.

ಶಾಸಕ ಹರೀಶ್ ಪೂಂಜ ರವರು ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಉತ್ತಮ ಫಲಿತಾಂಶ ದಾಖಲಿಸಿದೆ ಎಂದು ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸುಕುಮಾರ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ, ಬಂಟ್ವಾಳ ಆರ್ ಟಿ ಓ ಚರಣ್ ಕೆ. ಎ, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ , ಖ್ಯಾತ ನ್ಯಾಯವಾದಿ ಬಿ.ಕೆ ಧನಂಜಯ್ ರಾವ್ ಬೆಳ್ತಂಗಡಿ, ಬೆಳ್ತಂಗಡಿ ಟಿವಿಎಸ್ ಮೋಟಾರ್ಸ್ ಮಾಲಕ ರೋನಾಲ್ಡ್ ಲೋಬೊ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಸೂರಪ್ಪ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಪೂರ್ಣಿಮಾ , ನಿವೃತ್ತ ಕಂದಾಯ ನಿರೀಕ್ಷಕ ಪದ್ಮ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ವಾಮನ ಆಚಾರ್ಯ, ವಿದ್ಯಾರ್ಥಿ ನಾಯಕರುಗಳಾದ ಕುಮಾರ್ , ವೈಭವ ಆಚಾರ್ಯ, ಪ್ರಕೃತಿ, ಸಂಜನಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶೀನಾ ನಾಡೋಳಿ ನಿರ್ದೇಶನದ ವೈದೇಹಿ ವಿರಚಿತ (ಮೂಲ ಶೇಕ್ಸ್ ಪಿಯರ್) ನಾಟಕ ಧಾಂ ಧೂಮ್ ಸುಂಟರಗಾಳಿ ಎಂಬ ನಾಟಕವು ಕಾಲೇಜು ವಿದ್ಯಾರ್ಥಿಗಳಿಂದ ಯಶಸ್ವಿಯಾಗಿ ಪ್ರದರ್ಶಿಸಲ್ಪಟ್ಟು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಉಪನ್ಯಾಸಕ ಆನಂದ ಡಿ. ಸ್ವಾಗತಿಸಿದರು. ಕನ್ನಡ ಅಧ್ಯಾಪಕರು ಶ್ರೀಮತಿ ಪೂರ್ಣಿಮಾ ಕೆ ಕೆ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕ ಡಾ ಗಣೇಶ ರಾಮಚಂದ್ರ ಭಟ್ ಹಾಗೂ ಅಧ್ಯಾಪಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಹೆತ್ತವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
error: Content is protected !!