22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನೀತಾ MBBS, MD ಅವರು ಆಗಮಿಸಿದರು. ಸಮಾರಂಭಕ್ಕೆ ಅಧ್ಯಕ್ಷತೆಯನ್ನು ಎಸ್‌.ಡಿ‌.ಎಂ. ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿದರು.

ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ವಿಶ್ವ ಏಡ್ಸ್‌ ದಿನದ ಸಂಕೇತವಾದ ಕೆಂಪು ರಿಬನ್‌ ಧರಿಸಿ, ರೋಗಿ–ಸ್ನೇಹಿ ಸಮಾಜ ನಿರ್ಮಾಣದ ಬದ್ಧತೆಯನ್ನು ತೋರಿಸಿದರು. ಅವರು ಮಾನವ ಸರಪಳಿ ರೂಪಿಸಿ, ಏಡ್ಸ್‌ ಜಾಗೃತಿಯ ಸಂಕೇತವಾದ ಬೋ ಆಕಾರದ ರಚನೆಯನ್ನು ಕೂಡ ಮಾಡಿದರು. ಈ ವಿಶೇಷ ಆಕೃತಿ ಕಾರ್ಯಕ್ರಮಕ್ಕೆ ಮತ್ತಷ್ಟು ಸಂದೇಶಾತ್ಮಕತೆ ಮತ್ತು ಗಂಭೀರತೆಯನ್ನು ನೀಡಿತು.

ಏಡ್ಸ್‌ ಕುರಿತು ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕವು ಪ್ರೇಕ್ಷಕರ ಮನ ಸೆಳೆಯಿತು. ಸಮಾಜದಲ್ಲಿ ಏಡ್ಸ್‌ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ ಜಾಗೃತಿ ಹರಡುವಲ್ಲಿ ಈ ನಾಟಕ ಪರಿಣಾಮಕಾರಿ ಸಂದೇಶ ನೀಡಿತು.

ಎನ್‌.ಎಸ್‌.ಎಸ್‌. ಕಾರ್ಯಕ್ರಮಾಧಿಕಾರಿ ಡಾ. ಶಾಲ್ಮಲಿ ಸುನಿಲ್ ಸ್ವಾಗತಿಸಿದರು. ಗುರುಚರಣ್ ಧನ್ಯವಾದವಿತ್ತರು. ಸಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya
error: Content is protected !!