September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

ಬೆಳ್ತಂಗಡಿ: ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ತರಬೇತಿಯು ಡಿ.2-3ರಂದು ಜರುಗಿದ್ದು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಮಡಂತ್ಯಾರು ಪಂಚಾಯತ್ ನ ಅಧ್ಯಕ್ಷೆ ರೂಪ ಎಸ್, ಪಿಡಿಓ ಶ್ರೀನಿವಾಸ್ ರವರು ಭಾಗವಹಿಸುತ್ತಾರೆ.

ಭಾರತ ಸರ್ಕಾರದ ಪಂಚಾಯತ್ ರಾಜ್ ಸೂಚನೆಯಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 173 ಗ್ರಾಮ ಪಂಚಾಯಿತಿಗಳನ್ನು ‘ಪಂಚಾಯಿತಿ ಕಲಿಕಾ ಕೇಂದ್ರ” (Panchayat Learning Centre – PLC) ಗಳನ್ನು ಗುರುತಿಸಿದ್ದು, ಈ ಪಂಚಾಯಿತಿ ಕಲಿಕಾ ಕೇಂದ್ರಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉತ್ತಮ ಕಾರ್ಯಕ್ಷಮತೆ ಕಲಿಕೆಯ ಅವಕಾಶ ಕಲ್ಪಿಸುವುದು ಇಲ್ಲಿನ ಪ್ರಮುಖ ಆಶಯವಾಗಿದೆ. ಈಗಾಗಲೇ ತಮ್ಮ ಜಿಲ್ಲೆಯಲ್ಲಿ ತಮ್ಮ ಶಿಫಾರಸ್ಸಿನಂತೆ ಈಗಾಗಲೇ ಉತ್ತಮ ಕೆಲಸ ನಿರ್ವಹಣೆ ಮಾಡಿರುವ, ಪಂಚಾಯತ್ ರಾಜ್ ಆಶಯಕ್ಕೆ ಅನುಗುಣವಾಗಿ ವಿನೂತನ ಚಟುವಟಿಕೆಗಳನ್ನು ಕೈಗೊಂಡಿರುವ ಗ್ರಾಮ ಪಂಚಾಯಿತಿಗಳನ್ನು ಪಂಚಾಯಿತಿ ಕಲಿಕಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಲಾಗಿದೆ. ಈ ಪಂಚಾಯಿತಿ ಕಲಿಕಾ ಕೇಂದ್ರಗಳಲ್ಲಿ ತರಬೇತಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ.

ಪ್ರಸ್ತುತ ಈ ಪಂಚಾಯಿತಿ ಕಲಿಕಾ ಕೇಂದ್ರಗಳಲ್ಲಿ ಆಗಿರುವ ವಿನೂತನ ವಿಶಿಷ್ಟ ಕಾರ್ಯಚಟುವಟಿಕೆಗಳ ಯಶೋಗಾಥೆಗಳನ್ನು ಲಿಖಿತ ರೂಪದಲ್ಲಿ ದಾಖಲಿಸಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಪಂಚಾಯಿತಿ ಕಲಿಕಾ ಕೇಂದ್ರಗಳನ್ನು ಕುರಿತು ವಿಷಯ ಪರಿಚಯ ಮಾಡುವುದು ಮತ್ತು ಯಶೋಗಾಥೆಗಳು ದಾಖಲೀಕರಣ ಮಾಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.

Related posts

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya
error: Content is protected !!