37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಡಿಸೆಂಬರ್ 21 ಮತ್ತು 22 ರಂದು ಬದನಾಜೆ ಶಾಲಾ ಅಮೃತ ಮಹೋತ್ಸವ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣ ಮಾಡಿದ ‘ಸುಜ್ಞಾನ ಸಭಾಂಗಣ’ ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಉಜಿರೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ನಂತರದಲ್ಲಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನ ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿಗಳು ನಡೆಯುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!