25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಡಿಸೆಂಬರ್ 21 ಮತ್ತು 22 ರಂದು ಬದನಾಜೆ ಶಾಲಾ ಅಮೃತ ಮಹೋತ್ಸವ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣ ಮಾಡಿದ ‘ಸುಜ್ಞಾನ ಸಭಾಂಗಣ’ ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಉಜಿರೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ನಂತರದಲ್ಲಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನ ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿಗಳು ನಡೆಯುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya
error: Content is protected !!