24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಡಿಸೆಂಬರ್ 21 ಮತ್ತು 22 ರಂದು ಬದನಾಜೆ ಶಾಲಾ ಅಮೃತ ಮಹೋತ್ಸವ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣ ಮಾಡಿದ ‘ಸುಜ್ಞಾನ ಸಭಾಂಗಣ’ ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಉಜಿರೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ನಂತರದಲ್ಲಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನ ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿಗಳು ನಡೆಯುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!