July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು 31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ.

ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!