September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು 31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ.

ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!