September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಬೆಳ್ತಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಕಾಲೇಜು ವಾರ್ಷಿಕೋತ್ಸವವು ಡಿ.1 ರಂದು ಕಾಲೇಜು ಆವರಣದಲ್ಲಿ ನೆರವೇರಿತು.

ಶಾಸಕ ಹರೀಶ್ ಪೂಂಜ ರವರು ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಉತ್ತಮ ಫಲಿತಾಂಶ ದಾಖಲಿಸಿದೆ ಎಂದು ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸುಕುಮಾರ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ, ಬಂಟ್ವಾಳ ಆರ್ ಟಿ ಓ ಚರಣ್ ಕೆ. ಎ, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ , ಖ್ಯಾತ ನ್ಯಾಯವಾದಿ ಬಿ.ಕೆ ಧನಂಜಯ್ ರಾವ್ ಬೆಳ್ತಂಗಡಿ, ಬೆಳ್ತಂಗಡಿ ಟಿವಿಎಸ್ ಮೋಟಾರ್ಸ್ ಮಾಲಕ ರೋನಾಲ್ಡ್ ಲೋಬೊ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಸೂರಪ್ಪ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಪೂರ್ಣಿಮಾ , ನಿವೃತ್ತ ಕಂದಾಯ ನಿರೀಕ್ಷಕ ಪದ್ಮ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ವಾಮನ ಆಚಾರ್ಯ, ವಿದ್ಯಾರ್ಥಿ ನಾಯಕರುಗಳಾದ ಕುಮಾರ್ , ವೈಭವ ಆಚಾರ್ಯ, ಪ್ರಕೃತಿ, ಸಂಜನಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶೀನಾ ನಾಡೋಳಿ ನಿರ್ದೇಶನದ ವೈದೇಹಿ ವಿರಚಿತ (ಮೂಲ ಶೇಕ್ಸ್ ಪಿಯರ್) ನಾಟಕ ಧಾಂ ಧೂಮ್ ಸುಂಟರಗಾಳಿ ಎಂಬ ನಾಟಕವು ಕಾಲೇಜು ವಿದ್ಯಾರ್ಥಿಗಳಿಂದ ಯಶಸ್ವಿಯಾಗಿ ಪ್ರದರ್ಶಿಸಲ್ಪಟ್ಟು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಉಪನ್ಯಾಸಕ ಆನಂದ ಡಿ. ಸ್ವಾಗತಿಸಿದರು. ಕನ್ನಡ ಅಧ್ಯಾಪಕರು ಶ್ರೀಮತಿ ಪೂರ್ಣಿಮಾ ಕೆ ಕೆ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕ ಡಾ ಗಣೇಶ ರಾಮಚಂದ್ರ ಭಟ್ ಹಾಗೂ ಅಧ್ಯಾಪಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಹೆತ್ತವರು ಭಾಗವಹಿಸಿದ್ದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!