22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನೀತಾ MBBS, MD ಅವರು ಆಗಮಿಸಿದರು. ಸಮಾರಂಭಕ್ಕೆ ಅಧ್ಯಕ್ಷತೆಯನ್ನು ಎಸ್‌.ಡಿ‌.ಎಂ. ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವಹಿಸಿದರು.

ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ವಿಶ್ವ ಏಡ್ಸ್‌ ದಿನದ ಸಂಕೇತವಾದ ಕೆಂಪು ರಿಬನ್‌ ಧರಿಸಿ, ರೋಗಿ–ಸ್ನೇಹಿ ಸಮಾಜ ನಿರ್ಮಾಣದ ಬದ್ಧತೆಯನ್ನು ತೋರಿಸಿದರು. ಅವರು ಮಾನವ ಸರಪಳಿ ರೂಪಿಸಿ, ಏಡ್ಸ್‌ ಜಾಗೃತಿಯ ಸಂಕೇತವಾದ ಬೋ ಆಕಾರದ ರಚನೆಯನ್ನು ಕೂಡ ಮಾಡಿದರು. ಈ ವಿಶೇಷ ಆಕೃತಿ ಕಾರ್ಯಕ್ರಮಕ್ಕೆ ಮತ್ತಷ್ಟು ಸಂದೇಶಾತ್ಮಕತೆ ಮತ್ತು ಗಂಭೀರತೆಯನ್ನು ನೀಡಿತು.

ಏಡ್ಸ್‌ ಕುರಿತು ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕವು ಪ್ರೇಕ್ಷಕರ ಮನ ಸೆಳೆಯಿತು. ಸಮಾಜದಲ್ಲಿ ಏಡ್ಸ್‌ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ ಜಾಗೃತಿ ಹರಡುವಲ್ಲಿ ಈ ನಾಟಕ ಪರಿಣಾಮಕಾರಿ ಸಂದೇಶ ನೀಡಿತು.

ಎನ್‌.ಎಸ್‌.ಎಸ್‌. ಕಾರ್ಯಕ್ರಮಾಧಿಕಾರಿ ಡಾ. ಶಾಲ್ಮಲಿ ಸುನಿಲ್ ಸ್ವಾಗತಿಸಿದರು. ಗುರುಚರಣ್ ಧನ್ಯವಾದವಿತ್ತರು. ಸಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!