25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya
error: Content is protected !!