25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಡಿಸೆಂಬರ್ 21 ಮತ್ತು 22 ರಂದು ಬದನಾಜೆ ಶಾಲಾ ಅಮೃತ ಮಹೋತ್ಸವ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣ ಮಾಡಿದ ‘ಸುಜ್ಞಾನ ಸಭಾಂಗಣ’ ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಉಜಿರೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ನಂತರದಲ್ಲಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನ ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿಗಳು ನಡೆಯುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya
error: Content is protected !!