September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಎಲ್ ಕೆ ಜಿ, ಯು ಕೆ ಜಿ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡೋತ್ಸವವನ್ನು ಡಿ.3 ರಂದು ಎಲ್ ಸಿ ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ನಡೆಸಲಾಯಿತು.

ವಿದ್ಯಾಸಂಸ್ಥೆಯ ಸಹಶಿಕ್ಷಕಿಯರಾದ ಶ್ರೀಮತಿ ಪವಿತ್ರ ಹಾಗೂ ಶ್ರೀಮತಿ ಅಖಿಲಾ ರವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡು, ವಿದ್ಯಾರ್ಥಿ ನಾಯಕರು ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸುವುದರೊಂದಿಗೆ, ಪುಟ್ಟ ಮಕ್ಕಳ ಚಿಗುರು ಪ್ರತಿಭೆಗಳಿಗೆ ಸದಾ ಪ್ರೋತ್ಸಾಹ ನೀಡುವ ಸದುದ್ದೇಶವನ್ನು ಇಟ್ಟುಕೊಂಡು ಬಣ್ಣ ಬಣ್ಣದ ಬಲೂನುಗಳ ಆಕರ್ಷಕ ಚಿತ್ತಾರದ ಮೂಲಕ ಸಂಸ್ಥೆಯ ಪ್ರಾಂಶುಪಾಲರು,ಸಂಯೋಜಕರು ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಕಿಯವರು ಕಾರ್ಯಕ್ರಮದ ಉದ್ಘಾಟನೆ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ ಮಾತನಾಡಿ ಆಟಗಳು ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ಮತ್ತು ಮುದವನ್ನು ನೀಡುತ್ತವೆ ಎಲ್ಲಾ ಮಕ್ಕಳು ಎಳವೆಯಲ್ಲಿಯೇ ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ತಿಳಿಹೇಳಿದರು. ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಾ ಕೆ ಮಾತನಾಡಿ ಆಟಗಳು ಮಕ್ಕಳಲ್ಲಿ ಕ್ರೀಡಾ ಮನೋಭಾವ ಹಾಗೂ ಧೈರ್ಯವನ್ನು ತುಂಬುತ್ತವೆ. ಉತ್ಸಾಹದಿಂದ ಆಟಗಳನ್ನು ಆಡಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಜಿ ಕೆ ವಿದ್ಯಾರ್ಥಿಗಳಿಗೆಲ್ಲರಿಗೂ ಶುಭಹಾರೈಸಿದರು.

ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರಶಸ್ತಿ ಪದಕ ನೀಡಿ ಅಭಿನಂದಿಸಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಬೋಧಕೇತರ ವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆಲ್ಲರಿಗೂ ಸಹಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

ಸಹಶಿಕ್ಷಕಿ ಶ್ರೀಮತಿ ಲಾವಣ್ಯ ಸ್ವಾಗತಿಸಿ, ಪ್ರಿಯತ ನಿರೂಪಿಸಿ, ವಿದ್ಯಾರ್ಥಿ ನಾಯಕಿ ವಂದಿಸಿದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!