22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ.

ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ ಇದಾಗಿದೆ.


42೦೦೦ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಲ್ಲಿ 91 ಪ್ರೀಮಿಯಂ ರೂಮ್ಸ್, ೮ ಪ್ರೀಮಿಯಂ ಸೂಟ್ ರೂಮ್ಸ್, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಗ್ರೌಂಡ್, ವೆಜ್ ರೆಸ್ಟೊರೆಂಟ್, ನೀರಿನ ಕಾರಂಜಿ, ಸುಂದರವಾದ ಗಾರ್ಡನ್, ಗಿಫ್ಟ್ ಶಾಪ್, ಶಾಪಿಂಗ್ ಸೆಂಟರ್, ಹವಾನಿಯಂತ್ರಿತ ಹಾಗೂ ರಹಿತ ಸೌಲಭ್ಯಗಳಿದ್ದು ಸುಮಾರು ೫೦ ಮಂದಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಶ್ರೀಮತಿ ಅಪರ್ಣಾ ಗೌಡ ಮತ್ತು ಶಿವಕಾಂತ ಗೌಡ, ಮಮತಾ ಮತ್ತು ಶಿವರಾಮ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಶಿಷ್ ಎಸ್ ಗೌಡ, ಶೃತ ಎಸ್ ಗೌಡ, ಶ್ರೇಯಸ್ ಎಸ್ ಗೌಡ, ತೇಜಸ್ ಎಸ್ ಗೌಡ ಮತ್ತು ಎಸ್.ಪಿ ಗ್ರೂಪ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಲಿದ್ದಾರೆ.

Related posts

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!