September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ : ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಜಯಂತಿಯಂದು ನೀಡಲ್ಪಡುವ ಗಾಂಧೀ ಗ್ರಾಮ ಪುರಸ್ಕಾರದ 2023-24ನೇ ಸಾಲಿಗೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸೇರಿದಂತೆ ರಾಜ್ಯದ 238 ಗ್ರಾ.ಪಂ. ಗಳು ಆಯ್ಕೆಯಾಗಿದ್ದವು. ಪ್ರಶಸ್ತಿ ಘೋಷಣೆಯಾಗಿ ಎರಡು ವರ್ಷ ಕಳೆದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಆದರೆ ಪ್ರಶಸ್ತಿಯ ಮೊತ್ತವಾಗಿ ರೂ.5 ಲಕ್ಷ ವಿಶೇಷ ಅನುದಾನ ಪಂಚಾಯತ್ ಗಳಿಗೆ ಲಭಿಸಿತ್ತು. ಇದೀಗ ಕೊನೆಗೂ ಪ್ರಶಸ್ತಿ ಪ್ರದಾನವಾಗಿದೆ.

ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಡಿ.1ರಂದು ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು. ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಸತೀಶ್. ಕೆ ಕಾಶಿಪಟ್ಣ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಟೇಲ್ ಪ್ರಶಸ್ತಿ ಸ್ವೀಕರಿಸಿದರು.

Related posts

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya
error: Content is protected !!