25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ.

ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ ಇದಾಗಿದೆ.


42೦೦೦ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಲ್ಲಿ 91 ಪ್ರೀಮಿಯಂ ರೂಮ್ಸ್, ೮ ಪ್ರೀಮಿಯಂ ಸೂಟ್ ರೂಮ್ಸ್, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಗ್ರೌಂಡ್, ವೆಜ್ ರೆಸ್ಟೊರೆಂಟ್, ನೀರಿನ ಕಾರಂಜಿ, ಸುಂದರವಾದ ಗಾರ್ಡನ್, ಗಿಫ್ಟ್ ಶಾಪ್, ಶಾಪಿಂಗ್ ಸೆಂಟರ್, ಹವಾನಿಯಂತ್ರಿತ ಹಾಗೂ ರಹಿತ ಸೌಲಭ್ಯಗಳಿದ್ದು ಸುಮಾರು ೫೦ ಮಂದಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಶ್ರೀಮತಿ ಅಪರ್ಣಾ ಗೌಡ ಮತ್ತು ಶಿವಕಾಂತ ಗೌಡ, ಮಮತಾ ಮತ್ತು ಶಿವರಾಮ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಶಿಷ್ ಎಸ್ ಗೌಡ, ಶೃತ ಎಸ್ ಗೌಡ, ಶ್ರೇಯಸ್ ಎಸ್ ಗೌಡ, ತೇಜಸ್ ಎಸ್ ಗೌಡ ಮತ್ತು ಎಸ್.ಪಿ ಗ್ರೂಪ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಲಿದ್ದಾರೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!