September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ನಡ: “ಕಾಲೇಜಿನಲ್ಲಿ ಆಯೋಜಿಸಲಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಈಗ ಬಹುಮಾನವನ್ನು ಪಡೆಯುವ ಸಂಭ್ರಮ.”ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ
ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್ ನುಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮುರಳಿ ಬಲಿಪ ಪಾಲ್ಗೊಂಡು “ಎಲ್ಲಾ ಹಕ್ಕಿಗಳಿಗೂ ಆಹಾರ ಭಗವಂತ ಸೃಷ್ಟಿಸಿದ್ದಾನೆ ಆದರೆ ಅವು ಹುಡುಕಿಕೊಂಡು ಹೋಗಬೇಕು ಪ್ರಯತ್ನಬೇಕು.”ಎಂದು ಕರೆ ನೀಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಪ್ರಭಾಕರ ಮಯ್ಯ, ಅಜಿತ್ ಆರಿಗ, ಮುನಿರಾಜ ಅಜ್ರಿ, ಮೋಹನ ಗೌಡ, ಕುಮಾರ ಭವಿತ್ ಗೌಡ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಸ್ವಾಗತಿಸಿ, ಶ್ರೀಮತಿ ಸವಿತಾ ವಂದಿಸಿದರು. ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಪಿ. ವರದಿ ವಾಚಿಸಿದರು. ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಎಂಟು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರ ನಿರ್ವಹಣೆಯನ್ನು ಶಿಲ್ಪಾ ಡಿ ನಿರ್ವಹಿಸಿದರು. ಕ್ರೀಡಾ ಸಾಧಕರಿಗೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಪ್ರೇಮಿ ಹಾಗೂ ತರಬೇತುದಾರ ಅಜಿತ್ ಇವರನ್ನು ಸನ್ಮಾನಿಸಲಾಯಿತು.

Related posts

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!