24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ನಡ: “ಕಾಲೇಜಿನಲ್ಲಿ ಆಯೋಜಿಸಲಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಈಗ ಬಹುಮಾನವನ್ನು ಪಡೆಯುವ ಸಂಭ್ರಮ.”ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ
ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್ ನುಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮುರಳಿ ಬಲಿಪ ಪಾಲ್ಗೊಂಡು “ಎಲ್ಲಾ ಹಕ್ಕಿಗಳಿಗೂ ಆಹಾರ ಭಗವಂತ ಸೃಷ್ಟಿಸಿದ್ದಾನೆ ಆದರೆ ಅವು ಹುಡುಕಿಕೊಂಡು ಹೋಗಬೇಕು ಪ್ರಯತ್ನಬೇಕು.”ಎಂದು ಕರೆ ನೀಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಪ್ರಭಾಕರ ಮಯ್ಯ, ಅಜಿತ್ ಆರಿಗ, ಮುನಿರಾಜ ಅಜ್ರಿ, ಮೋಹನ ಗೌಡ, ಕುಮಾರ ಭವಿತ್ ಗೌಡ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಸ್ವಾಗತಿಸಿ, ಶ್ರೀಮತಿ ಸವಿತಾ ವಂದಿಸಿದರು. ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಪಿ. ವರದಿ ವಾಚಿಸಿದರು. ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಎಂಟು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರ ನಿರ್ವಹಣೆಯನ್ನು ಶಿಲ್ಪಾ ಡಿ ನಿರ್ವಹಿಸಿದರು. ಕ್ರೀಡಾ ಸಾಧಕರಿಗೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಪ್ರೇಮಿ ಹಾಗೂ ತರಬೇತುದಾರ ಅಜಿತ್ ಇವರನ್ನು ಸನ್ಮಾನಿಸಲಾಯಿತು.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!