September 6, 2026
ಅಪಘಾತಪೊಲೀಸ್ವರದಿ

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

ನಾರಾವಿ: ಡಿ.3 ರಂದು ನಾರಾವಿ ಗ್ರಾಮದ ಮಂಜುನಗರ ಎಂಬಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಭಾಸ್ಕರ ಆಚಾರ್ಯ ರಸ್ತೆಗೆ ಬಿದ್ದು, ಗಾಯಗೊಂಡು ಮೂಡಬಿದ್ರೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇನೋವಾ ಕಾರಿನ ಚಾಲಕ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ನೇರ ರಸ್ತೆಯಲ್ಲಿ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ತನ್ನ ಎದುರಿನಿಂದ ಹೋಗುತ್ತಿದ್ದ ಒಂದು ವಾಹನವನ್ನು ಓವರಟೇಕ್ ಮಾಡಲು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ನಾರಾವಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭಾಸ್ಕರ್ ಆಚಾರ್ಯ ಬೈಕನೊಂದಿಗೆ ರಸ್ತೆಗೆ ಬಿದ್ದು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya
error: Content is protected !!