22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಗಾಗಿ ಶಿಕ್ಷಣ ಸಿಂಧೂರ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಹಳ್ಳಿ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉತ್ತಮ ಮಟ್ಟದ ವಿದ್ಯಾಭ್ಯಾಸವನ್ನು ಪಡೆಯುವ ಉದ್ದೇಶಕ್ಕಾಗಿ 1996 ರಲ್ಲಿ ಪ್ರಾರಂಭಗೊಂಡ ವಿದ್ಯಾಸಂಸ್ಥೆಯು ಉತ್ತಮ ಮಟ್ಟದ ವಿದ್ಯಾಭ್ಯಾಸವನ್ನು ನೀಡುತ್ತಿದೆ. ಶಿಕ್ಷಣಕ್ಕೆ ಮಾತ್ರ ಪ್ರಶಸ್ತಿಯನ್ನು ನೀಡುವುದಲ್ಲದೆ ಸಂಗೀತ, ಭರತನಾಟ್ಯ, ಕರಾಟೆ ,ಯೋಗ, ಡ್ಯಾನ್ಸ್ ತರಗತಿಗಳು ನುರಿತ ತರಬೇತುದಾರದಿಂದ ನಡೆಯುತ್ತದೆ. ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಮಟ್ಟದ ಶಿಕ್ಷಣ ನೀಡಲಾಗುತಿದ್ದು,ಶೈಕ್ಷಣಿಕ ಸಾಧನೆಗೆ ಸ್ಟಾರ್ ಆಫ್ ಏಷ್ಯಾ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ,ಪ್ರಭುದ್ಧ ಭಾರತ ಶಿಕ್ಷಣ ಬೀಷ್ಮ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .

ಈ ಎಲ್ಲಾ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಯೋಗದಲ್ಲಿ 2026 ರ ಜನವರಿ 4 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ವೇದಿಕೆಯಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ನಡೆಯಲಿದೆ .ಇದು ಶಾಲಾ ಆಡಳಿತ ಮಂಡಳಿಗೆ ತುಂಬಾ ಹೆಮ್ಮೆಯ ವಿಷಯವಾಗಿದೆ.

Related posts

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya
error: Content is protected !!